ಶ್ರೀದೇವಿ ರಮಣ ಮಹರ್ಷಿ ಪುರಸ್ಕಾರ 2025, ಮತ್ತು ಗ್ರಂಥ ಲೋಕಾರ್ಪಣೆ ಕಾರ್ಯಕ್ರಮವು ಸೆಪ್ಟಂಬರ್ 6 ರಂದು ಬೆಳಿಗ್ಗೆ 10:30 ಗಂಟೆಗೆ ತುಮಕೂರಿನ ಶ್ರೀದೇವಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯಲಿದೆ. ಈ ಬಗ್ಗೆ ಸಂಸ್ಥೆಯ ನಿರ್ದೇಶಕ ಡಾ. ರಮಣ ಹುಲಿನಾಯ್ಕರ್ ಹೇಳಿದರು. ಅವರು ತುಮಕೂರಿನ ಶ್ರೀದೇವಿ ತಾಂತ್ರಿಕ ಕಾಲೇಜಿನಲ್ಲಿ ಗುರುವಾರ ಮಧ್ಯಾಹ್ನ 1.30 ರ ಸಮಯದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಶ್ರೀ ದುರ್ಗಾಂಬಾ ದೇವಸ್ಥಾನ ಚಾರಿಟಬಲ್ ಟ್ರಸ್ಟ್ ಮತ್ತು ಶ್ರೀದೇವಿ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.