ಮಂಡ್ಯ ವಿಭಾಗ ವ್ಯಾಪ್ತಿಯಲ್ಲಿರುವ ಮಂಡ್ಯ ಉಪ ವಿಭಾಗ, ಕೊತ್ತತ್ತಿ ಉಪ ವಿಭಾಗ ಮತ್ತು ಕೆರಗೋಡು ಉಪ-ವಿಭಾಗದ ವ್ಯಾಪ್ತಿಯ ವಿದ್ಯುತ್ ಸಮಸ್ಯೆಗಳ ಕುರಿತು ಚರ್ಚಿಸಲು ವಿದ್ಯುತ್ ಗ್ರಾಹಕರ ಕುಂದು ಕೊರತೆ ವಿಚಾರಣೆಯ ಜನ ಸಂಪರ್ಕ ಸಭೆಯನ್ನು ಮಂಡ್ಯ ವೃತ್ತದ ಇಂಜಿನಿಯರ್ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ಸೆ.17 ರಂದು ನಗರದಲ್ಲಿ ಆಯೋಜಿಸಲಾಗಿದೆ. ಈ ಕುರಿತು ಶುಕ್ರವಾರ ಸೆಸ್ಕ್ ಎಇಇ ಮಾಹಿತಿ ನೀಡಿ, ಬೆಳಿಗ್ಗೆ 11 ಗಂಟೆಗೆ ಮಂಡ್ಯ ವಿಭಾಗ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದಿದ್ದಾರೆ. ಮಂಡ್ಯ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಗ್ರಾಹಕರು / ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಲು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.