ಅತಿವೃಷ್ಠಿಯಿಂದ ಬೆಳೆ ಹಾನಿಯಾದ ರೈತರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ ವಿವಿಧ ರೈತ ಸಂಘಟನೆಗಳಿಂದ ಪ್ರತಿಭಟನೆ. ಅತಿವೃಷ್ಠಿಯಿಂದ ಬೆಳೆ ಹಾನಿಯಾದ ರೈತರಿಗೆ ಪರಿಹಾರ ವಿತರಿಸಬೇಕು ಮತ್ತು ಮನೆ ಕಳೆದುಕೊಂಡವರಿಗೆ ಯೋಗ್ಯ ಪರಿಹಾರ ನೀಡಿ ಉತ್ತರ-ದಕ್ಷಿಣ ಕರ್ನಾಟಕ ತಾರತಮ್ಯ ನೀಗಿಸಬೇಕೆಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ, ಉತ್ತರ ಕರ್ನಾಟಕ ಹೋರಾಟ ಸಮಿತಿ ಮತ್ತು ಅಹಿಂದ್ ಸಂಘಟನೆಯ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು