Download Now Banner

This browser does not support the video element.

ಮಂಡ್ಯ: ಮೀನುಗಾರರಿಗೆ ಉತ್ತಮ ತರಬೇತಿ ನೀಡಿ: ನಗರದಲ್ಲಿ ಡಿಸಿ ಡಾ.ಕುಮಾರ ಸೂಚನೆ

Mandya, Mandya | Aug 28, 2025
ಜಿಲ್ಲೆಯಲ್ಲಿ 45 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಮೀನುಗಾರರಿದ್ದು ಅವರ ಆರ್ಥಿಕ ಮಟ್ಟದ ಸುಧಾರಣೆಗಾಗಿ ಮೀನು ಸಾಕಾಣಿಕೆ ಕೌಶಲ್ಯದ ಕುರಿತಾಗಿ ತರಬೇತಿ ನೀಡಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಗುರುವಾರ ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ 2025-26 ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಮೀನುಗಾರಿಕೆ ಇಲಾಖೆಯ 177 ಕೆರೆಗಳು ಹಾಗೂ ಗ್ರಾಮ ಪಂಚಾಯಿತಿಯ 688 ಕೆರೆಗಳು ಒಟ್ಟು 865 ಕೆರೆಗಳು ಹಾಗೂ 26 ನದಿ ಭಾಗಗಳು ಮೀನು ಸಾಕಾಣಿಕೆಗೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 2024-25 ನೇ ಸಾಲಿನ 383 ಲಕ್ಷ ಮೀನು ಮರಿಗಳನ್ನು ಬಿತ್ತನೆ ಮಾಡಲಾಗಿದೆ ಎಂದರು.
Read More News
T & CPrivacy PolicyContact Us