ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಸೆಪ್ಟೆಂಬರ್ 11ರಂದು ಬೆಳಿಗ್ಗೆ 10:30ಕ್ಕೆ ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ಆಯೋಜಿಸಿದ್ದ "ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ" ಉದ್ಘಾಟಿಸಿ ಅವರು ಮಾತನಾಡಿದರು.ಹಸಿರಿನ ಹೊದಿಕೆ ಹೆಚ್ಚಾದರೆ ಅರಣ್ಯ ಸಂಪತ್ತು ಹೆಚ್ಚುತ್ತದೆ. ಕಾಡು ಪ್ರಾಣಿ ಸಂಪತ್ತಿನಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಕಾಡು ಪ್ರಾಣಿಗಳಿಗೆ ಅಗತ್ಯವಾದ ಆಹಾರ, ನೀರು ಕಾಡಿನಲ್ಲೇ ಸಾಕಷ್ಟು ಸಿಗುವಂತೆ ಮಾಡಿದರೆ ಅರಣ್ಯ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಬಹುದು ಎಂದರು.