ಗಣೇಶೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿಗಳ ವಿಸರ್ಜನೆ ಮಲೆನಾಡು ಭಾಗದಲ್ಲಿ ಭಕ್ತಿ-ಭಾವಪೂರ್ಣವಾಗಿ ಹಾಗೂ ಅದ್ದೂರಿಯಾಗಿ ನಡೆಸಲಾಗುತ್ತಿದೆ. ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದಲ್ಲಿ ನಡೆದ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಶೃಂಗೇರಿ ಶಾಸಕರಾದ ಟಿ.ಡಿ. ರಾಜೇಗೌಡ ಅವರು ಪಾಲ್ಗೊಂಡು ಬುಧವಾರ ಸಂಜೆ ಸುಮಾರು 5 ಗಂಟೆ ಸುಮಾರಿಗೆ ಟ್ರ್ಯಾಕ್ಟರ್ನ್ನು ಚಾಲನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಶಾಸಕರು ಹಾಗೂ ಕುಟುಂಬದ ಸದಸ್ಯರು ಈ ಸಂದರ್ಭದಲ್ಲಿ ವಿಘ್ನೇಶ್ವರನ ಆಶೀರ್ವಾದಕ್ಕೆ ಪಾತ್ರರಾದರು. ಬಾಳೆಹೊನ್ನೂರಿನ ವಿದ್ಯಾ ಗಣಪತಿ ವಿಸರ್ಜನಾ ಕಾರ್ಯಕ್ರಮದಲ್ಲಿ ಭಕ್ತರ ಹರ್ಷೋಲ್ಲಾಸದ ನಡುವೆಯೇ ಮೆರವಣಿಗೆ ಭವ್ಯವಾಗಿ ಸಾ