ರಾಜ್ಯ ಸಚಿವ ಸಂಪುಟದ ಮುಂದಿನ ಸಭೆ ಬಿಜಾಪುರದಲ್ಲಿ ನಡೆಯಲಿದ್ದು, ಬಳಿಕ ಮಂಗಳೂರಿನಲ್ಲಿ ಸಭೆ ನಡೆಯಲಿದೆ. ಈ ಸಂದರ್ಭ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜಿಲ್ಲೆಯ ಅಗತ್ಯ ಬೇಡಿಕೆಗಳ ಕುರಿತಂತೆ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ತಿಳಿಸಿದ್ದಾರೆ. ಸರ್ಕ್ಯೂಟ್ ಹೌಸ್ನಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸುವ ಕುರಿತಂತೆ ಈಗಾಗಲೇ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಲಭ್ಯವಾಗಿದೆ ಎಂದರು.