ಗಣೇಶೋತ್ಸವ 11ನೇ ದಿನದ ಗಣೇಶ ಮೂರ್ತಿ ವಿಸರ್ಜನೆ ವೇಳೆ ಮನೆಗಳ್ಳತನ ಮಾಡಲು ಬಂದಿದ್ದ ಕಳ್ಳರನ್ನು ಬೆನ್ನಟ್ಟಿದ ಸ್ಥಳೀಯರು, ಇಬ್ಬರು ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಧಾರವಾಡದ ಕೆಲಗೇರಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಉಪನಗರ ಠಾಣೆಯ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದು, ಇವರಿಂದ ಹಲವು ಪ್ರಕರಣಗಳು ಹೊರಬರುವ ಸಾಧ್ಯತೆಯಿದೆ.