ಗಣೇಶ ಮೂರ್ತಿ ಪ್ರತಿಷ್ಠಾಪಿಸಿ 11ನೇ ದಿನದ ಹಿನ್ನಲೆಯಲ್ಲಿ ಸೆಪ್ಟೆಂಬರ್ 6, ಶನಿವಾರ ಮಧ್ಯಾಹ್ನ 1:30ಕ್ಕೆ ಕಂಪ್ಲಿ ಪಟ್ಟಣದ 10ನೇ ವಾರ್ಡ್ ನ ಜೆಬಿ ಟೈಗರ್ಸ್ ಯುವಕರ ತಂಡದ ವತಿಯಿಂದ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಭಕ್ತರಿಗಾಗಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿತ್ತು. ಭಕ್ತರು ಹಾಗೂ ಗ್ರಾಮಸ್ಥರು ಭಾಗವಹಿಸಿ ಪೂಜೆ ಹಾಗೂ ಅನ್ನಪ್ರಸಾದ ಸ್ವೀಕರಿಸಿದರು