ಗೌರಿಬಿದನೂರು ತಾಲೂಕಿನ ನಗರಗೆರೆ ಹೋಬಳಿಯ ಶ್ರೀನಿವಾಸ ಚಾರ್ಲಹಳ್ಳಿ ಗ್ರಾಮದಲ್ಲಿನ ಮನೆಯೊಂದರಲ್ಲಿ ವಿದ್ಯುತ್ ಅವಘಡ ಸಂಭವಿಸಿದೆ. ನವೀನ್ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಅಗತ್ಯ ವಸ್ತುಗಳಾದ ಪಡಿತರ ಸಾಮಗ್ರಿ,ಬಟ್ಟೆ ಸೇರಿದಂತೆ ಹಲವಾರು ಸಾಮಗ್ರಿಗಳು ಸುಟ್ಟುಕರಕಲಾಗಿವೆ ಎಂದು ಇಂದು ತಿಳಿದು ಬಂದಿದೆ. ಇದರಿಂದಾಗಿ ನವೀನ್ ರವರ ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.