ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಪುರ ಗ್ರಾಮದಲ್ಲಿ ಹುಲಿ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಹುಲಿ ಬೋನಿಗೆ ಕೂಡಿ ಹಾಕಿದರು. ಈ ಸಂಬಂಧ ಉಪ ವಲಯ ಅರಣ್ಯ ಅಧಿಕಾರಿ ಜ್ಞಾನ ಶೇಖರ್ ಅವರು ಐದು ಜನ ರೈತರು ವಿರುದ್ಧ ದೂರು ನೀಡಿದರು. ಇಂದು ಅರಣ್ಯ ಅಧಿಕಾರಿಗಳ ವಿರುದ್ಧವೂ ರೈತ ಸಂಘದ ಕಾರ್ಯಕರ್ತರು ಗುಂಡ್ಲುಪೇಟೆ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ.