ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಕೊಲೆ ಹಾಸನ: ನಗರದಲ್ಲಿ ಯುವಕನೊಬ್ಬನನ್ನು ಭೀಕರವಾದ ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಯರೇಹಳ್ಳಿ ಗ್ರಾಮದ ಬಳಿ ನಡೆದಿದೆ. ಹಾಸನದ ದೊಡ್ಡ ಮಂಡಿಗನಹಳ್ಳಿ ನಿವಾಸಿ ಅಂಕಿತ್ (26) ಕೊಲೆಯಾದ ಯುವಕ. ಆಟೋ ಚಾಲಕನಾಗಿದ್ದ ಅಂಕಿತ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ನಿನ್ನೆ ರಾತ್ರಿ ಅಂಕಿತ್ ಬೈಕ್ನಲ್ಲಿ ರಾಗಿ ಮುದ್ದನಹಳ್ಳಿ ಕಡೆಗೆ ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಘಟನೆ ಕುರಿತಂತೆ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.