ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೊಲಗೇರಿ ಗ್ರಾಮಕ್ಕೆ ಖಾಸಗಿ ಕಾರ್ಯಕ್ರಮದ ಪ್ರಯುಕ್ತವಾಗಿ ಆಗಮಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರನ್ನು ಶಾಸಕ ಅಶೋಕ ಮನಗೂಳಿ ಹಾಗೂ ಪಕ್ಷದ ಕಾರ್ಯಕರ್ತರು ಭಾನುವಾರ ಸಾಯಂಕಾಲ 4ಗಂಟೆ ಸುಮಾರಿಗೆ ಆತ್ಮೀಯವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿ, ಮುಂಬರುವ ತಾಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿಯ ಚುನಾವಣೆಯ ಕುರಿತು ಮಾಹಿತಿ ಪಡೆದರು ಇನ್ನೂ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕು ಎಂದು ಸೂಚನೆ ನೀಡಿದರು.