ಚಿತ್ತಾಪೂರ ತಾಲೂಕಿನ ಚಾಮನೂರು ಗ್ರಾಮಗಳಲ್ಲಿ ಅತಿವೃಷ್ಟಿ ಉಂಟಾಗಿದೆ ಹಿನ್ನೆಲೆ ಸಚಿವ ಪ್ರಿಯಾಂಕ್ ಖರ್ಗೆ ಸೆ.29 ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಾಳಜಿ ಕೇಂದ್ರಕ್ಕೆ ಭೇಟಿ ಸಚಿವರು, ಕಾಳಜಿ ಕೇಂದ್ರಗಳಲ್ಲಿರುವ ಹಾಗೂ ಪ್ರವಾಹ ಪೀಡಿತ ಜನರಿಗೆ ಊಟ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.