Download Now Banner

This browser does not support the video element.

ಭಟ್ಕಳ: ಮುರುಡೇಶ್ವರ ನೇತ್ರಾಣಿ ಬಳಿ ಪರ್ಷಿಯನ್ ಬೋಟ್ ಮುಳುಗಡೆ ; 25 ಮೀನುಗಾರರ ರಕ್ಷಣೆ

Bhatkal, Uttara Kannada | Sep 1, 2025
ಭಟ್ಕಳ ತಾಲೂಕಿನ ಮುರುಡೇಶ್ವರ ಸಮೀಪದ ನೇತ್ರಾಣಿ ದ್ವೀಪದ ಬಳಿಪರ್ಷಿಯನ್ ಬೋಟ್ ಮುಳುಗಡೆಯಾಗಿದ್ದು, ಅದೃಷ್ಟವಶಾತ್ ಬೋಟ್ನಲ್ಲಿದ್ದ 25 ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿರುವ ಬಗ್ಗೆ ಸೋಮವಾರ ಸಂಜೆ 6.30ಕ್ಕೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಈ ಬೋಟ್ ಮುಳುಗಡೆಯಾಗಿದೆ. ಸಮೀಪದಲ್ಲಿದ್ದ ಮೀನುಗಾರಿಕಾ ಬೋಟಿಯವರು ರಕ್ಷಣೆ ಮಾಡಿದ್ದಾರೆ. ಈ ದುರಂತದಿಂದ ಅಂದಾಜು 80 ಲಕ್ಷ ರೂ.ಗಳಿಗೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
Read More News
T & CPrivacy PolicyContact Us