ಆ.27ರಿಂದ ಸೆ.16ರವರೆಗೆ ದಾವಣಗೆರೆ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆಯನ್ನು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಅವರು ನಿಷೇಧಿಸಿ ದಾವಣಗೆರೆ ನಗರದಲ್ಲಿ ಗುರುವಾರ ಸಂಜೆ 4 ಗಂಟಗೆ ಪತ್ರಿಕಾ ಪ್ರಕಟಣೆ ಮೂಲಕ ಆದೇಶಿಸಿದ್ದಾರೆ. ಜಿಲ್ಲೆಯ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆಗಳು ಪೂರ್ಣಗೊಳ್ಳುವವರೆಗೆ ಆಗಸ್ಟ್ 27 ರಿಂದ ಸೆಪ್ಟೆಂಬರ್ 16 ರವರೆಗೆ ಜಿಲ್ಲೆಯಾದ್ಯಂತ ಡಿ.ಜೆ ಸಿಸ್ಟಂ ಬಳಕೆ ನಿಷೇಧಗೊಳಿಸಿ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ ಆದೇಶಿಸಿದ್ದಾರೆ.