Download Now Banner

This browser does not support the video element.

ಕಾರ್ಕಳ: ಗದರಿಸಿದ್ದಕ್ಕೆ ಮಾಲೀಕನನ್ನು ಕತ್ತಿಯಿಂದ ಕಡಿದ ಸಿಬ್ಬಂದಿ, ಪುಣೆಯಲ್ಲಿ ಕಾರ್ಕಳ ಮೂಲದ ಹೋಟೆಲ್ ಮಾಲೀಕನ ಕೊಲೆ

Karkala, Udupi | Aug 27, 2025
ಮಹಾರಾಷ್ಟ್ರದ ಪೂನಾದಲ್ಲಿ ಮಂಗಳವಾರ ರಾತ್ರಿ ಹೊಟೇಲ್ ಸಿಬ್ಬಂದಿಯೊಬ್ಬ ಕೆಲಸದ ವಿಚಾರದಲ್ಲಿ ಗದರಿದ ಹೊಟೇಲ್ ಮಾಲೀಕನನ್ನೇ ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಸಂಭವಿಸಿದೆ. ಕಾರ್ಕಳ ತಾಲೂಕಿನ ಎಣ್ಣೆಹೊಳೆ ಕುಮೇರುಮನೆ ನಿವಾಸಿ ಹೊಟೇಲ್ ಉದ್ಯಮಿ ಸಂತೋಷ್‌ ಶೆಟ್ಟಿ(46) ಎಂದು ತಿಳಿದುಬಂದಿದೆ.ಉತ್ತರ ಪ್ರದೇಶ ಮೂಲದ ವೆಯ್ಸ‌ರ್ ಹೊಟೇಲ್ ನಲ್ಲಿ ಕೆಲಸದ ಸಮಯದಲ್ಲಿ ಮದ್ಯಪಾನ ಮಾಡಿರುವುದಕ್ಕೆ ಬೈದು ಬುದ್ಧಿವಾದ ಹೇಳಿದ್ದಕ್ಕೆ ಸಿಟ್ಟಿಗೆದ್ದ ಆತ ಕಿಚನ್'ನಿಂದ ಕತ್ತಿ ಹಿಡಿದುಕೊಂಡು ಬಂದು ಸಂತೋಷ್ ಶೆಟ್ಟಿಯವರು ಕುಳಿತ್ತಿದ್ದ ವೇಳೆ ಹಿಂಬದಿಯಿಂದ ಕುತ್ತಿಗೆಗೆ ಕಡಿದು ಹತ್ಯೆ ಮಾಡಿದ್ದಾನೆ.
Read More News
T & CPrivacy PolicyContact Us