ಧಾರವಾಡದ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಇಂದಿನಿಂದ ಆರಂಭವಾಗಲಿರುವ ಕೃಷಿ ಮೇಳದ ಮೊದಲ ದಿನವೇ ದುರಂತ ಸಂಭವಿಸಿದೆ. ಶನಿವಾರ ಕೃಷಿ ಮೇಳದಲ್ಲಿ ಪ್ರದರ್ಶನಕ್ಕೆಂದು ತರಲಾಗಿದ್ದ ಮಿನಿ ಟ್ರ್ಯಾಕ್ಟರ್ ಓರ್ವ ವ್ಯಕ್ತಿಯ ಮೇಲೆ ಬಿದ್ದು ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತುಮಕೂರು ಮೂಲದ ಪರಶುರಾಮ (32) ಎಂಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಧಾರವಾಡ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.