Download Now Banner

This browser does not support the video element.

ಬಳ್ಳಾರಿ: ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿ ಕಾಣೆ; ಪತ್ತೆಗೆ ಪೊಲೀಸರು ಮನವಿ.

Ballari, Ballari | Aug 25, 2025
ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹರೀಶ್ ಕುಮಾರ್ ಸ್ವಾಮಿ ಎನ್ನುವ 26 ವರ್ಷದ ವ್ಯಕ್ತಿಯು ಕಾಣೆಯಾಗಿದ್ದು, ಈ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕಾರಿ ಸೋಮವಾರ ಸಂಜೆ 4ಗಂಟೆಗೆ ತಿಳಿಸಿದ್ದಾರೆ. ಚಹರೆ ಗುರುತು: ಅಂದಾಜು 5.8 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ಮೂಗಿನ ಮೇಲೆ ಒಂದು ಕಪ್ಪು ಮಚ್ಚೆ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಕಪ್ಪು ಬಣ್ಣದ ಟೀ-ಶರ್ಟ್ ಹಾಗೂ ಕಪ್ಪು ಬಣ್ಣ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಹಿಂದಿ ಮತ್ತು ಆಂಗ್ಲ ಭಾಷೆ ಮಾತನಾಡುತ್ತಾನೆ. ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಗಾಂಧಿನಗರ ಪೊಲೀಸ್ ಠಾಣೆ ಅಥವಾ ಬಳ್ಳಾರಿ ಕಂಟ್ರೋಲ್ ರೂಂ ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More News
T & CPrivacy PolicyContact Us