ಗೌರಿಬಿದನೂರು ನಗರದಲ್ಲಿ ಶನಿವಾರ ಲಯನ್ಸ್ ಸಂಸ್ಥೆಗಳ ವತಿಯಿಂದ ಬೃಹತ್ ರಕ್ತದಾನ ಶಿಬಿರ ಮತ್ತು ಕಣ್ಣಿನ ತಪಸಣಾ ಶಿಬಿರ ಆಯೋಜನೆ ಮಾಡಲಾಗಿತ್ತು. ಈ ವೇಳೆ ನಗರದ ವಿವಿಧ ವಾರ್ಡುಗಳಿಂದ ಹಾಗೂ ತಾಲೂಕಿನ ವಿವಿಧ ಗ್ರಾಮಗಳಿಂದ ಕಣ್ಣಿನ ಸಮಸ್ಯೆಗಳು ಇರುವಂತಹ ನಾಗರಿಕರು ಆಗಮಿಸಿ ತಪಾಸಣೆ ಮಾಡಿಸಿಕೊಂಡರು. ಹಾಗೆಯೇ ರಕ್ತದಾನ ಶಿಬಿರದಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಿ ರಕ್ತದಾನ ಮಾಡಿದರು.