Download Now Banner

This browser does not support the video element.

ತೀರ್ಥಹಳ್ಳಿ: ಆಗುಂಬೆಯಲ್ಲಿ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ

Tirthahalli, Shimoga | Aug 26, 2025
ಬೈಕ್ ಸವಾರನೋರ್ವ ರಸ್ತೆಯ ಬದಿಯಲ್ಲಿ ಇಟ್ಟಿದ್ದ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ರಸ್ತೆಯ ರಾಕ್‌ ವ್ಯೂ ಹೋಟೆಲ್ ಸಮೀಪ ಮಂಗಳವಾರ ಬೆಳಗಿನ ಜಾವ 5 ಗಂಟೆಗೆ ನಡೆದಿದೆ. ಕಮ್ಮರಡಿ ಗ್ರಾಮದ ನಿವಾಸಿ ವಿಶ್ವಮೂರ್ತಿ ಗಾಯಗೊಂಡವರು. ಅಡುಗೆ ಕೆಲಸ ಮುಗಿಸಿಕೊಂಡು ತಮ್ಮ ಸ್ಪ್ಲೆಂಡರ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಎದುರಿನಿಂದ ಬಂದ ವಾಹನವನ್ನು ತಪ್ಪಿಸಲು ಹೋಗಿ ಬೈಕ್ ನಿಯಂತ್ರಣ ತಪ್ಪಿ ರಸ್ತೆಯಲ್ಲಿದ್ದ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ವಿಶ್ವಮೂರ್ತಿಯವರಿಗೆ ಗಂಭೀರ ಗಾಯ ಗಳಾಗಿದ್ದು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
Read More News
T & CPrivacy PolicyContact Us