Download Now Banner

This browser does not support the video element.

ಮಂಗಳೂರು: ಭೂಮಿ ಕಳೆದುಕೊಳ್ಳುವವರಿಗೆ ಸೂಕ್ತ ಪರಿಹಾರ ಕೊಡ್ಬೇಕು: ಲಾಲ್ ಬಾಗ್ ನಲ್ಲಿ ಎಂಎಲ್ ಸಿ ಐವನ್ ಡಿಸೋಜಾ ಹೇಳಿಕೆ

Mangaluru, Dakshina Kannada | Sep 4, 2025
ಮಂಗಳೂರು ವಿಮಾನ ನಿಲ್ದಾಣದಲ್ಲಿ ರನ್ ವೇಯನ್ನು150 ಮೀ. ವಿಸ್ತರಿಸಬೇಕೆಂಬ ನಿರ್ಧಾರ ಕೈಗೊಳ್ಳಲಾಗಿದ್ದು, ಇದಕ್ಕೆ 32.97 ಎಕರೆ ಜಾಗ ಒದಗಿಸುವಂತೆ ರಾಜ್ಯ ಸರಕಾರಕ್ಕೆ ವಿಮಾನ ನಿಲ್ದಾಣ ಪ್ರಾಧಿಕಾರ ಮನವಿ ಮಾಡಿದೆ. ವಿಮಾನ ನಿಲ್ದಾಣದಿಂದ ರಾಜ್ಯ ಸರಕಾರಕ್ಕೆ ಯಾವುದೇ ಪಾಲು ಸಿಗದ ಹಿನ್ನೆಲೆ ಪ್ರಾಧಿಕಾರ ಹಾಗೂ ಗುತ್ತಿಗೆ ವಹಿಸಿಕೊಂಡಿರುವ ಅದಾನಿ ಕಂಪೆನಿ ಭೂ ಸ್ವಾಧೀನ ವೆಚ್ಚವನ್ನು ಭರಿಸಬೇಕು ಎಂದು ಸರಕಾರ ತಿಳಿಸಿದ್ದು, ಪ್ರಾಧಿಕಾರ ಅದಾನಿ ಸಂಸ್ಥೆಗೆ ಭೂ ಸ್ವಾಧೀನ ವೆಚ್ಚ ಭರಿಸಲು ತಿಳಿಸಿದೆ. ಭೂಮಿ ಕಳೆದುಕೊಳ್ಳುವವರಿಗೆ ಸೂಕ್ತ ಪರಿಹಾರ, ಉದ್ಯೋಗ ಹಾಗೂ ವಸತಿ ವ್ಯವಸ್ಥೆಯನ್ನುಕಂಪೆನಿ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು.
Read More News
T & CPrivacy PolicyContact Us