Download Now Banner

This browser does not support the video element.

ಶಿವಮೊಗ್ಗ: ಕರ್ನಾಟಕದಲ್ಲಿ ಡುಪ್ಲಿಕೇಟ್ ಕಾಂಗ್ರೆಸ್ ಇದೆ: ನಗರದಲ್ಲಿ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ

Shivamogga, Shimoga | Sep 10, 2025
ಕರ್ನಾಟಕದಲ್ಲಿ ಡುಪ್ಲಿಕೇಟ್ ಕಾಂಗ್ರೆಸ್ ಇದೆ. ಮದ್ದೂರಿನಲ್ಲಿ ನಡೆದ ಘಟನೆ ಕಾಂಗ್ರೆಸ್ ಪಕ್ಷಕ್ಕೆ ಅಪಮಾನ. ಈ ರೀತಿ ಮದ್ದೂರಿನಲ್ಲಿ ನಡೆದ ವ್ಯವಸ್ಥೆ ಉತ್ತರ ಪ್ರದೇಶದಲ್ಲಿ ನಡೆದಿದ್ದರೆ, ಭದ್ರಾವತಿಯಲ್ಲಿ ನಡೆದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಉತ್ತರ ಪ್ರದೇಶದಲ್ಲಿ ಕೂಗಿದರೆ. ಆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗುಂಡಿಟ್ಟು ಕೊಲ್ಲುತ್ತಿದ್ದರು ಎಂದು ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ ರಾಷ್ಟ್ರದ್ರೋಹಿಗಳಿಗೆ ಬೆಂಬಲ ಕೊಡ್ತಿದೆ ಎಂದು ಆರೋಪಿಸಿದರು.
Read More News
T & CPrivacy PolicyContact Us