ಚಿತ್ರದುರ್ಗ ನಗರದಲ್ಲಿ ಸೆ.13 ರಂದು ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಮೆರವಣಿಗೆ ಬೃಹತ್ ಶೋಭಾಯಾತ್ರೆಯಲ್ಲಿ 9 ಡಿಜೆ ಗಳು ಭಾಗವಹಿಸಲಿವೆ ಎಂಬುದಾಗಿ ಸುಳ್ಳು ಸುದ್ದಿಯನ್ನು ಫೇಸ್ಬುಕ್ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸಿದಕ್ಕಾಗಿ ಮಂಜುನಾಥ್ ಎಂಬಾತನ ವಿರುದ್ಧ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಚಿತ್ರದುರ್ಗ ನಗರದಲ್ಲಿ ಸೆ.13 ರಂದು ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಸಂದರ್ಭದಲ್ಲಿ ಘರ್ಜಿಸಲು 9 DJ ಮುಂಬೈ, ಬೆಳಗಾವಿ, ಹುಬ್ಬಳ್ಳಿ ಹಾಗೂ ಇನ್ನೂ ಹೆಸರಾಂತ 9 ಡಿಜೆಗಳು ಭಾಗವಹಿಸಲಿವೆ’ ಎಂದು ಸುಳ್ಳು ಸುದ್ದಿ ಹಾಕಿಸಿದ್ದ.