ಬಾಗಲಕೋಟ ಜಿಲ್ಲೆಯ ಬೀಳಗಿ ಪೋಲಿಸ್ ಠಾಣಾ ವ್ಯಾಪ್ತಿಯ ಅನಗವಾಡಿ ಗ್ರಾಮದಲ್ಲಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ಅಗಸ್ಟ ೨೨ ಮಧ್ಯಾಹ್ನ ೩ ಗಂಟೆಗೆ ನಡೆದ ಶಾಂತಿ ಸಮಿತಿ ಸಭೆಯಲ್ಲಿ ಪಿಎಸ್ಐ ಶರಣಬಸಪ್ಪ ಸಂಗಳದ ಮಾತನಾಡಿ ಸರ್ಕಾರದ ಆದೇಶಗಳನ್ನು ಪಾಲಿಸಿ, ಉತ್ಸವವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸುವಂತೆ ಸೂಚಿಸಿದರು. ಈ ಸಮಯದಲ್ಲಿ ಗ್ರಾಮದ ಮುಖಂಡರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.