Download Now Banner

This browser does not support the video element.

ಶಿವಮೊಗ್ಗ: ಧರ್ಮಸ್ಥಳದ ನಾಟಕ ಕೊನೆಗೊಂಡಿದೆ: ಶಿವಮೊಗ್ಗದಲ್ಲಿ ರಾಷ್ಟ್ರಭಕ್ತ ಬಳಗ ಮುಖಂಡ ಶ್ರೀಕಾಂತ್‌

Shivamogga, Shimoga | Aug 30, 2025
ಧರ್ಮಸ್ಥಳದ ನಾಟಕ ಕೊನೆಗೊಂಡಿದೆ. ಧರ್ಮವೇ ಗೆದ್ದಿದೆ. ಧರ್ಮಸ್ಥಳದ ಪರವಾಗಿ ಮೊದಲ ಹೋರಾಟ ರೂಪಿಸಿದವರೇ ರಾಷ್ಟ್ರಭಕ್ತ ಬಳಗ. ಅದರ ಪ್ರತಿಫಲ ಈಗ ಸಿಕ್ಕಿದೆ ಎಂದು ರಾಷ್ಟ್ರ ಭಕ್ತ ಬಳಗ ಮುಖಂಡ ಶ್ರೀಕಾಂತ್‌ ಹೇಳಿದರು. ಶಿವಮೊಗ್ಗದಲ್ಲಿ ಶನಿವಾರ ಸಂಜೆ 5:30 ಕ್ಕೆ ಮಾತನಾಡಿದ ಅವರು, ಧರ್ಮಸ್ಥಳಕ್ಕೆ ಇದ್ದ ಕಳಂಕ ಕಳಚಿದೆ ಈ ಹಿನ್ನಲೆಯಲ್ಲಿ ಕೆ.ಈ. ಕಾಂತೇಶ್‌ರವರ ನೇತೃತ್ವದಲ್ಲಿ ಸೆ.2ರ ಬೆಳಿಗ್ಗೆ 8 ಗಂಟೆಗೆ ರಾಷ್ಟ್ರಭಕ್ತ ಬಳಗದ ಸಂಚಾಲಕ ಈಶ್ವರಪ್ಪ ಅವರ ನಿವಾಸದಿಂದ ಧರ್ಮಸ್ಥಳಕ್ಕೆ ಸುಮಾರು 300 ವಾಹನಗಳಲ್ಲಿ ರಾಷ್ಟ್ರಭಕ್ತ ಬಳಗದ ಸದಸ್ಯರು ಹಾಗೂ ಧರ್ಮಸ್ಥಳ ಭಕ್ತರು ತೆರಳಿ ವಿಶೇಷ ಪೂಜೆ ಧರ್ಮಸ್ಥಳದಲ್ಲಿ ಸಲ್ಲಿಸಲಾಗುವುದು. ಜೊತೆಗೆ ತರಕಾರಿ ಹಾಗೂ ಅಕ್ಕಿಯನ್ನು ಸಮರ್ಪಿಸಲಾಗುವುದು ಎಂದರು.
Read More News
T & CPrivacy PolicyContact Us