ಜಗನ್ನಾಥ ಭವನ ಸಾರ್ವಜನಿಕ ಚಟುವಟಿಕೆಗೆ ಬಳಕೆ ಆಗಬೇಕೆಂಬ ಉದ್ದೇಶದಿಂದ ‘ಮಾಸದ ಮಾಧುರ್ಯ’ ಕಾರ್ಯಕ್ರಮ ಆರಂಭಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ತೆಲುಗು ವಿಜ್ಞಾನ ಸಮಿತಿಯ ಶ್ರೀಕೃಷ್ಣದೇವರಾಯ ಸಭಾಂಗಣದಲ್ಲಿ ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ನಡೆದ ‘ಜಗನ್ನಾಥ ಬಳಗ’ ಮತ್ತು ಬಿಜೆಪಿ ಸಾಂಸ್ಕøತಿಕ ಪ್ರಕೋಷ್ಠದ ‘ಮಾಸದ ಮಾಧುರ್ಯ’ 100 ರ ಸಂಭ್ರಮಾಚರಣೆ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಣೇಶ್ ಯಾಜಿ ಮತ್ತು ದತ್ತಗುರು ಹೆಗ್ಡೆ ಅವರು ಈ ಕಾರ್ಯಕ್ರಮದ ಜೊತೆ ಬಲವಾಗಿ ನಿಂತವರು ಎಂದು ಮೆಚ್ಚುಗೆ ಸೂಚಿಸಿದರು. 100 ತಿಂಗಳು ಬಿಡದೆ ಮಾಡುವುದು ವೃತದಂತೆ ಎಂದು ನುಡಿದರು.