ಚಿತ್ರದುರ್ಗ ನಗರಕ್ಕೆ ಗಣೇಶ ಶೋಭಯಾತ್ರೆ ಸೇರಿ ಹಲವು ಕಾರ್ಯಕ್ರಮಗಳಿಗೆ ಶರಣ್ ಪಂಪ್ ವೆಲ್ ಅವರನ್ನ ನಿರ್ಬಂಧ ವಿಧಿಸಿ ಚಿತ್ರದುರ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಆದೇಶ ಸೋಮವಾರ ಬೆಳಿಗ್ಗೆ 10 ಗಂಟೆ ವೇಳೆಗೆ ಬೆಳಕಿಗೆ ಬಂದಿದೆ. VHP ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಅವರನ್ನ ನಿರ್ಬಂಧಿಸಿದೆ. ಹಿಂದೂ ಮಹಾಗಣಪತಿ ಶೋಭಯಾತ್ರೆ ಹಿನ್ನೆಲೆ ನಿರ್ಬಂಧ ವಿಧಿಸಿ ಡಿಸಿ ಆದೇಶಿಸಿದ್ದಾರೆ. ಶಾಂತಿ & ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಜಿಲ್ಲಾಡಳಿತ ಈ ನಿರ್ಧಾರ ಮಾಡಿದೆ ಎನ್ನಲಾಗಿದೆ. ಸೆ.9 ರಿಂದ ಸೆ.15 ರವೆಗೆ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಸೆ.11 ರಂದು ಹಿಂದೂ ಮಹಾಗಣಪತಿ ಶೋಭಯಾತ್ರೆ ಹಿನ್ನೆಲೆ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.