ಧಾರವಾಡದ ಐತಿಹಾಸಿಕ ಸೋಮೇಶ್ವರ ಹಾಗೂ ನುಗ್ಗಿಕೇರಿ ಹನುಮಂತ ದೇವರ ದೇವಸ್ಥಾನದ ಗರ್ಭಗುಡಿಯನ್ನು ಭಾನುವಾರ ಬಂದ್ ಮಾಡಲಾಗಿದೆ. ವರ್ಷದ ಕೊನೆಯ ಖಗ್ರಾಸ ಚಂದ್ರ ಗ್ರಹಣ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ, ದೇವಸ್ಥಾನ ಟ್ರಸ್ಟ್ ಕಮಿಟಿ ಯಾವುದೇ ಪೂಜೆ-ಪುನಸ್ಕಾರಕ್ಕೆ ಅವಕಾಶ ನೀಡಿಲ್ಲ. ಚಂದ್ರ ಗ್ರಹಣ ಮುಗಿದ ನಂತರ, ಸೋಮವಾರ ಬೆಳಿಗ್ಗೆ 5 ಗಂಟೆಗೆ ಭಕ್ತರು ದೇವರ ದರ್ಶನ ಪಡೆಯಬಹುದಾಗಿದೆ.