ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಬಳ್ಳಾಪುರ ಗ್ರಾಮದ ನಾರಿ ಹಳ್ಳವು ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ತುಂಬಿ ಹರಿಯುತ್ತಿದೆ. ಸೆಪ್ಟೆಂಬರ್ 11, ಗುರುವಾರ ಬೆಳಿಗ್ಗೆ 9 ಗಂಟೆ ವೇಳೆಗೆ ಹಳ್ಳ ತುಂಬಿ ಹರಿದು ಪಕ್ಕದ ಭತ್ತದ ಗದ್ದೆಗಳಿಗೆ ನೀರು ನುಗ್ಗಿದೆ. ಇದರ ಪರಿಣಾಮವಾಗಿ ರೈತರ ಬೆಳೆಗಳಿಗೆ ಹಾನಿ ಸಂಭವಿಸುವ ಸಾಧ್ಯತೆ ಇದೆ.ಸ್ಥಳೀಯರು ಸುರಕ್ಷತೆಯ ದೃಷ್ಟಿಯಿಂದ ಹಳ್ಳದ ತೀರಕ್ಕೆ ಹೋಗದಂತೆ ಎಚ್ಚರಿಕೆ ವಹಿಸಿಕೊಂಡಿದ್ದಾರೆ