ಹನೂರು:ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ದೊಡ್ಡಲ್ಲತ್ತೂರು ಮಾರಮ್ಮ ದೇವಾಲಯದಲ್ಲಿ ಕಳ್ಳತನ ನಡೆದ ಘಟನೆ ಗ್ರಾಮಸ್ಥರಲ್ಲಿ ಆತಂಕವನ್ನು ಮೂಡಿಸಿದೆ. ದೇವಾಲಯದ ಬೀಗವನ್ನು ಹೊಡೆದು ಒಳ ಪ್ರವೇಶಿಸಿದ ದುಷ್ಕರ್ಮಿಗಳು, ದೇವಾಲಯದ ಒಳಗೆ ಇದ್ದ ಎರಡು ಹುಂಡಿಗಳನ್ನು ಮುರಿದು, ಒಳಗಿನ ಹಣವನ್ನು ದೋಚಿ ಪರಾರಿಯಾಗಿದ್ದಾರೆ.ಕಳ್ಳರು ದೋಚಿದ ಹಣದ ಪ್ರಮಾಣ ಇನ್ನೂ ಖಚಿತವಾಗಿಲ್ಲ. ದೋಚಿದ ಬಳಿಕ ಹುಂಡಿಗಳನ್ನು ದೇವಾಲಯದ ಮುಂಭಾಗದ ರಸ್ತೆಯಲ್ಲಿ ಬಿಸಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಹಿತಿ ದೊರೆತ ತಕ್ಷಣ ರಾಮಾಪುರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಸ್ಥಳೀಯರು ಈ ಘಟನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ದೇವಾಲಯದ ಸುರಕ್ಷತೆಯ ಮೇಲೆ ಪ್ರಶ್ನೆ ಎತ್ತಿದ್ದಾರೆ.