ಹಾವೇರಿ ಜಿಲ್ಲೆ ರಾಣೆಬೆನ್ನೂರಲ್ಲಿ ಶನಿವಾರ ರಾಣೆಬೆನ್ನೂರು ಕಾ ರಾಜಾ ಗಣೇಶ ನಿಮಜ್ಜನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಣೆಬೆನ್ನೂರಲ್ಲಿ ಶನಿವಾರ ಮದ್ಯ ಮಾರಾಟ ನಿಷೇಧಿಸಿ ಹಾವೇರಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ್ ದಾನಮ್ಮನವರ್ ಆದೇಶ ಹೊರಡಿಸಿದ್ದಾರೆ. ಗಣೇಶ ನಿಮಜ್ಜನ ಹಿನ್ನೆಲೆಯಲ್ಲಿ ಶೋಭಾಯಾತ್ರೆ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.