Download Now Banner

This browser does not support the video element.

ಹಾವೇರಿ: ನಗರದ ಹೊಯ್ಸಳ ಲಾಡ್ಜ್ ನಲ್ಲಿ ವಿಷ ಸೇವಿಸಿ ಕಾರು ಚಾಲಕ ಆತ್ಮಹತ್ಯೆ; ಶಹರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್

Haveri, Haveri | Aug 31, 2025
ನಗರದ ಖಾಸಗಿ ಹೋಟೆಲ್‌ ನಲ್ಲಿ ಕಾರು ಚಾಲಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಧಾರವಾಡ ಜಿಲ್ಲೆಕುಂದಗೋಳ ತಾಲೂಕು ಯರಿನಾರಾಯಣಪುರ ಗ್ರಾಮದ ಮಹಾಂತೇಶ ಕಲ್ಲಣ್ಣನವರ (27) ಮೃತ ದುರ್ದೈವಿಯಾಗಿದ್ದಾರೆ. ಈತ ಕಳೆದ ಆರು ತಿಂಗಳಿನನಿಂದ ದಾವಣಗೆರಿಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡಿಕೊಂಡಿರುತ್ತಾನೆ. ಯಾವುದೋ ಕಾರಣಕ್ಕೆ ಮನಸ್ಸಿಗೆ ಬೇಜಾರ ಮಾಡಿಕೊಂಡು ಖಾಸಗಿ ಹೋಟೆಲ್‌ನಲ್ಲಿ ವಿಷ ಸೇವಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾನೆಂದು ಮೃತನ ತಂದೆ ಕಲ್ಲಪ್ಪ ಕಲ್ಪಣ್ಣನವರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More News
T & CPrivacy PolicyContact Us