ರಾಯಚೂರು ಜಿಲ್ಲೆಯ ಲಿಂಗಸೂಗೂರ ವಿಧಾನಸಭಾ ಕ್ಷೇತ್ರದ ಮುದಗಲ್ ಪಟ್ಟಣದ ಬಳಿ ಟಂ ಟಂ ಆಟೋ ಮತ್ತು ದ್ವಿಚಕ್ರ ವಾಹನ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬುಧವಾರ ಮಧ್ಯಾನ ನಡೆದಿದೆ. ಮುದಗಲ್ ಪಟ್ಟಣದ ಮಸ್ಕಿ ರಸ್ತೆಯ ಬಾಬಾಕಟ್ಟೆ ಬಳಿ ಅಪಘಾತ ಸಂಭವಿಸಿದೆ, ಅಪಘಾತದಲ್ಲಿ ಹನುಮೇಶ್ ಹೂಗಾರ ಎನ್ನುವ 30 ವರ್ಷದ ಯುವಕ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ. ಆಟೋ ಚಾಲಕ ಆಟೋ ಬಿಟ್ಟು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ, ಘಟನಾ ಸ್ಥಳಕ್ಕೆ ಮುದಗಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.