ಬಳ್ಳಾರಿ ತಾಲ್ಲೂಕಿನ ಕೊಳಗಲ್ ಗ್ರಾಮದಲ್ಲಿ ಸೆ.13 ರವರೆಗೆ ನಡೆಸಲು ಉದ್ದೇಶಿಸಿರುವ ಸದ್ಗುರು ಶ್ರೀ ಎರ್ರಿತಾತನವರ 111ನೇ ಪುಣ್ಯಾರಾಧನೆ, ಪುರಾಣ ಪ್ರವಚನ ಹಾಗೂ ಎರ್ರಿತಾತನವರ 12ನೇ ಪುಣ್ಯಾರಾಧನೆ ಕಾರ್ಯಕ್ರಮಗಳನ್ನು ನಡೆಸದಂತೆ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳಗಲ್ಲು ಗ್ರಾಮದಲ್ಲಿ ಸದ್ಗುರು ಶ್ರೀ ಎರ್ರಿತಾತನವರ ದೇವಸ್ಥಾನದ ಆಡಳಿತ ಹಾಗೂ ಆಸ್ತಿ ಸಂಬAಧ ವಿವಾದಗಳಿದ್ದು, ಸಮುದಾಯಗಳ ಮಧ್ಯ ವೈಷ್ಯಮ್ಯ ಇರುವುದರಿಂದ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ನಷ್ಟ ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವುದರಿಂದ ಈ ಮೇಲ್ಕಂಡ ಕಾರ್ಯಕ್ರಮಗಳನ್ನು ನಡೆಸದಂತೆ ಇತ್ತೀಚೆಗೆ