ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗಬೇನಾಳ ಗ್ರಾಮದಲ್ಲಿ ತೋಳಗಳ ದಾಳಿಗೆ ಸುಮಾರು ಹತ್ತಕ್ಕೂ ಹೆಚ್ಚು ಕುರಿಗಳು ಬಲಿಯಾಗಿರುವ ದುರ್ಘಟನೆ ನಡೆದಿದೆ. ಕುರಿಗಾರರು ಕುರಿಗಳನ್ನು ಮೇಯಿಸುವ ಸಂದರ್ಭದಲ್ಲಿ ಏಕಾಏಕಿ ತೋಳಗಳು ದಾಳಿ ಮಾಡಿ ಸುಮಾರು 10ಕ್ಕೂ ಹೆಚ್ಚು ಕುರಿಗಳನ್ನು ಕೊಂದಿದ್ದಾವೆ ಇನ್ನು ಘಟನಾ ಸ್ಥಳಕ್ಕೆ ಗುರುವಾರ ಸಾಯಂಕಾಲ 4ಗಂಟೆ ಸುಮಾರಿಗೆ ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎಸ್ ಪಾಟೀಲ್ ನಡಹಳ್ಳಿ ಭೇಟಿ ನೀಡಿ ಕುರಿಗಾರರಿಗೆ ಸಾಂತ್ವನ ಹೇಳಿದರು. ಕೂಡಲೇ ಅಧಿಕಾರಿಗಳು ಕುರಿಗಾರರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಕುರಿಗಾರರು ಹಾಗೂ ಬಿಜೆಪಿ ಮುಖಂಡರುಗಳು ಉಪಸ್ಥಿತರಿದ್ದರು.