Download Now Banner

This browser does not support the video element.

ಹನೂರು: ಹನೂರಿನ ಕ್ಷೇತ್ರಶಿಕ್ಷಣಾಧಿಕಾರಿ ದಿಡೀರ್‌‌ ಹೃದಯಘಾತದಿಂದ‌ ನಿಧನ

Hanur, Chamarajnagar | Sep 9, 2025
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ 53) ದಿಡೀರ್ ಹೃದಯಾಘಾತದಿಂದ ಮಂಗಳವಾರ ಮುಂಜಾನೆ 2ರಲ್ಲಿ ನಿಧನರಾಗಿದ್ದಾರೆ. ಅವರು ಕಳೆದ ಒಂದು ವರ್ಷದಿಂದ ಹನೂರು ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇತ್ತೀಚೆಗೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಎರಡು ತಿಂಗಳ ಹಿಂದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ, ಸೋಮವಾರ ರಾತ್ರಿ ಏಕಾಏಕಿ ಮತ್ತೆ ಹೃದಯಾಘಾತ ಸಂಭವಿಸಿ, ತಕ್ಷಣವೇ ಅವರನ್ನು ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಅವರು ಕೊನೆಯುಸಿರೆಳೆದರು.
Read More News
T & CPrivacy PolicyContact Us