ಉಡುಪಿ ಶ್ರೀ ಕೃಷ್ಣ ಮಠ ಜನ್ಮಾಷ್ಟಮಿ ಸಂಭ್ರಮಕ್ಕೆ ಸಿದ್ಧವಾಗುತ್ತಿದೆ. ಶ್ರೀ ಕೃಷ್ಣನ ಬಾಲ ಲೀಲೆಗಳನ್ನು ತೋರಿಸುವ ವಿಟ್ಲಪಿಂಡಿ ಉತ್ಸವ ಉಡುಪಿ ಅಷ್ಟಮಿಯ ಪ್ರಮುಖ ಆಕರ್ಷಣೆಯಾಗಿದೆ. ಈ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಅಷ್ಟಮಠಗಳ ರಥ ಬೀದಿಯಲ್ಲಿ ಮಹಿಳೆಯರು, ಪುರುಷರು, ಮಕ್ಕಳು, ವೃದ್ಧರು ಎಲ್ಲ ಸೇರಿ ಗ್ರಾಮೀಣ ಕ್ರೀಡೆಯಲ್ಲಿ ಭಾಗಿಯಾದರು. ಟೊಂಕ ,ಕಬಡ್ಡಿ ,ಓಟ ಸೇರಿದಂತೆ ವಿವಿಧ ಗ್ರಾಮೀಣ ಆಟಗಳನ್ನು ಆಡಿ ಜನ ಸಂಭ್ರಮಿಸಿದರು. ಈ ಗ್ರಾಮೀಣ ಕ್ರೀಡೋತ್ಸವ ಕೃಷ್ಣ ಭಕ್ತರಿಗೆ ಹೊಸ ಹುರುಪು ನೀಡಿತು.