ಕಲಬುರಗಿ : ಅವೈಜ್ಞಾನಿಕ ಒಳಮೀಸಲಾತಿ ವಿರುದ್ಧ ಸೆಪ್ಟೆಂಬರ್ 8 ರಂದು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಂಸದ ಡಾ ಉಮೇಶ್ ಜಾಧವ್ ಹೇಳಿದ್ದಾರೆ.. ಸೆ4 ರಂದು ಮಧ್ಯಾನ 12 ಗಂಟೆಗೆ ನಗರದಲ್ಲಿ ಮಾತನಾಡಿದ ಅವರು, ಅಂದು ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನ ಮೆರವಣಿಗೆ ನಡೆಸಿ ಡಿಸಿ ಕಚೇರಿ ಬಳಿ ರಾಜ್ಯ ಸರ್ಕಾರದ ಅವೈಜ್ಞಾನಿಕ ಒಳಮೀಸಲಾತಿ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆಯೆಂದು ಮಾಜಿ ಸಂಸದ ಡಾ ಉಮೇಶ್ ಜಾಧವ್ ಹೇಳಿದ್ದಾರೆ.