ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಹವಮಾನ ಇಲಾಖೆ ಸೂಚನೆಯಂತೆ ಈ ರೆಡ್ ಅಲರ್ಟ್ ಘೋಷಣೆಯನ್ನು ಜಿಲ್ಲಾಡಳಿತ ಬುಧವಾರ ಸಂಜೆ 6ಕ್ಕೆ ಮಾಡಿದೆ. ಕಳೆದ ಎರಡು ದಿನಗಳಿಂದ ಸತತ ಮಳೆಯಾಗುತ್ತಿದ್ದು ಬುಧವಾರ ಮಳೆಯ ಅಬ್ಬರ ಹೆಚ್ಚಿದೆ. ಈ ಅವಧಿಯಲ್ಲಿ ಮೀನುಗಾರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಪ್ರವಾಸಿಗರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.