ಕಾರವಾರ : ಜಿಲ್ಲೆಯಾಧ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮತ್ತು ರೆಡ್ ಅಲರ್ಟ್ ಇರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಮತ್ತು ಹಳಿಯಾಳ ತಾಲೂಕು ಹೊರತು ಪಡಿಸಿ ಮಿಕ್ಕುಳಿದ ಹತ್ತು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ನಾಳೆ ಗುರುವಾರ ರಜೆಯನ್ನು ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಬುಧವಾರ ಸಂಜೆ 7 ಗಂಟೆ ಸುಮಾರಿಗೆ ಅಧಿಕೃತ ಆದೇಶ ನೀಡಿದ್ದಾರೆ