Download Now Banner

This browser does not support the video element.

ರಾಯಚೂರು: ನಗರದಲ್ಲಿ ಅಲೆಮಾರಿಗಳು ತಂಬೂರಿ ಬಾರಿಸುತ್ತಾ ಸರ್ಕಾರದ ಮುಂದಿಟ್ಟ ಬೇಡಿಕೆ ಏನು ಗೊತ್ತೆ

Raichur, Raichur | Aug 25, 2025
ನ್ಯಾಯಮೂರ್ತಿ ನಾಗಮೋಹನದಾಸ್ ಅವರ ಒಳ ಮೀಸಲಾತಿ ವರದಿ 2025 ಅನ್ವಯ ಪರಿಶಿಷ್ಟ ಅಲೆಮಾರಿಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ಜಾರಿಗೆ ಆಗ್ರಹಿಸಿ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ನೇತೃತ್ವದಲ್ಲಿ ಅಲೆಮಾರಿಗಳು ತಂಬೂರಿ ಬಾರಿಸುತ್ತಾ ಪ್ರತಿಭಟನೆ ನಡೆಸಿದರು. ಆಗಸ್ಟ್ 25 ರ ಸೋಮವಾರ ಮಧ್ಯಾಹ್ನ 2 ಗಂಟೆಗೆ ನಗರದ ನೂತನ ಜಿಲ್ಲಾಡಳಿತ ಭವನದ ಮುಂದೆ ನ್ಯಾಯ ಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಲೆಮಾರಿಗಳಿಗೆ ಶೇ.1 ರಷ್ಟು ಪ್ರತ್ಯೇಕವಾಗಿ ಮೀಸಲಾತಿ ಜಾರಿಗೆ ಮಾಡುವ ಮೂಲಕ ಅಲೆಮಾರಿ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.
Read More News
T & CPrivacy PolicyContact Us