ಬೂತ್ ಮಟ್ಟದಲ್ಲಿ ನಾಯಕರಾಗಿ ಬೆಳೆದು ನಿಮ್ಮ ಸಾಮರ್ಥ್ಯ ಪ್ರದರ್ಶಿಸಿದರೆ ಮಾತ್ರ ರಾಜಕೀಯದಲ್ಲಿ ಎತ್ತರಕ್ಕೆ ಬೆಳೆಯಲು ಸಾಧ್ಯ. ಅಲ್ಲಿ ನಿಮ್ಮ ಶಕ್ತಿ ಸಾಬೀತು ಮಾಡಿದರೆ ದೊಡ್ಡ ಮಟ್ಟದ ನಾಯಕರಾಗಿ ಬೆಳೆಯಬಹುದು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದ ಯುವ ಕಾಂಗ್ರೆಸ್ ರಾಜ್ಯ ಕಾರ್ಯಕಾರಿಣಿ ಸಭೆ ಉದ್ದೇಶಿಸಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಗಳಾಗಿದ್ದವರು, ಅವರ ವಿರುದ್ಧ ಹೋರಾಟ ಮಾಡಿದ್ದಕ್ಕೆ ನನಗೆ ಸಾತನೂರು ಕ್ಷೇತ್ರದಿಂದ ಟಿಕೆಟ್ ನೀಡಿದರು. ಏಕೆಂದರೆ ನನ್ನ ಸಂಘಟನೆಯ ಸಾಮರ್ಥ್ಯ ಅಷ್ಟು ಚೆನ್ನಾಗಿತ್ತು.