ಧಾರವಾಡದ ಕೃಷಿ ಮೇಳದ ಹಿನ್ನೆಲೆಯಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಅಧಿಕಾರಿಗಳು ಹಾಗೂ ಧಾರವಾಡ ಜಿಲ್ಲಾಡಳಿತ ಅಧಿಕಾರಿಗಳ ಸಭೆಯನ್ನು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸಂಜೆ 5 ಗಂಟೆಗೆ ಸಭೆ ನಡೆಸಿ, ಸೆಪ್ಟೆಂಬರ್ 13 ರಿಂದ 16 ರ ವರೆಗೆ ಧಾರವಾಡ ಕೃಷಿ ಮೇಳ ನಡೆಯಲಿದೆ ಎಂದು ಪ್ರಕಟಿಸಿದರು. ಇನ್ನೂ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.