ಬಸವಕಲ್ಯಾಣ: ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಸರಜವಳಗಾ, ಮಿರ್ಜಾಪೂರ ಸೇರಿದಂತೆ ವಿವಿಧ ಗ್ರಾಮಗಳ ಬಳಿಯ ಸೇತುವೆಗಳು ತುಂಬಿ ಹರಿಯುತಿದ್ದು, ಸಂಚಾರ ಸಂಪೂರ್ಣ ಬಂದ್ ಆಗಿದೆ. ಸುದ್ದಿ ತಿಳಿದ ತಹಶೀಲ್ದಾರ ಡಾ: ದತ್ತಾತ್ರೇಯ ಗಾದಾ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದ್ದು, ತುಂಬಿ ಹರಿಯುತ್ತಿರುವ ಸೇತುವೆಗಳ ಮೇಲಿಂದ ಸಂಚರಿಸದಂತೆ ಜನರಿಗೆ ಮನವಿ ಮಾಡಿದ್ದಾರೆ