ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆ ನಗರದಾದ್ಯಂತ ಪೊಲೀಸ್ ಪಥಸಂಚಲನ ನಡೆಸಲಾಯಿತು. ಕಿಡಿಗೇಡಿಗಳು ಹಬ್ಬದ ಆಚರಣೆ ಸಂದರ್ಭದಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸದಂತೆ ಎಚ್ಚರಿಕೆ ನೀಡಲಾಯಿತು. ಮಂಗಳವಾರ ಸಂಜೆ 5 ಗಂಟೆಗೆ ಧಾರವಾಡ ನಗರದ ಪ್ರಮುಖ ರಸ್ತೆಗಳಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸ್ ತುಕಡಿಗಳು ಹಾಗೂ ಸೇನಾ ಪಡೆಯ ತುಕಡಿಗಳು ಆಕರ್ಷಕ ಪಥಸಂಚಲನ ನಡೆಯಿತು.