ಗಣೇಶ ಮೆರವಣಿಗೆ ಸಂದರ್ಭದಲ್ಲಿ ವೈಯಕ್ತಿಕ ಕಾರಣಕ್ಕಾಗಿ ಎರಡು ಗುಂಪುಗಳ ಮಧ್ಯೆ ಜಗಳ ಉಂಟಾಗಿ ಮಾರಾಮಾರಿ ನಡೆದಿದ್ದು ಪರಿಸ್ಥಿತಿ ನಿಯಂತ್ರಿಸಲು ಹೋದ ಪಿಎಸ್ ಐ ಕಣ್ಣಿಗೆ ಖಾರದಪುಡಿ ಎತಚಿದ ಘಟನೆ ರಾಯಚೂರು ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. ನಗರದ ವಾರ್ಡ ನಂಬರ್ 22 ರ ಗದ್ವಾಲ್ ರಸ್ತೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ನಡೆಯುವಾಗ ವೈಯಕ್ತಿಕ ಕಾರಣಕ್ಕಾಗಿ ಬಿಜೆಪಿ ಮುಖಂಡ ಯು. ನರಸರೆಡ್ಡಿ ಮತ್ತು ಡ್ಯಾಡಿ ವೀರೇಶ ಅವರ ಎರಡು ಗುಂಪುಗಳ ನಡುವೆ ಜಗಳ ಉಂಟಾಗಿ ಹೊಡೆದಾಡಿಕೊಂಡಿದ್ದಾರೆ. ಖಾರದಪುಡಿ ಯೊಂದಿಗೆ ಘರ್ಷಣೆಗೆ ಇಳಿದಾಗ ಪರಿಸ್ಥಿತಿ ತಿಳಿಗೊಳಿಸಲು ಬಂದ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯ ಪಿಎಸ್ಐ ಅವರ ಕಣ್ಣಿಗೆ ಕಾರದ ಪುಡಿ ಎರಚಿ ಕಲ್ಲು ತೂರಾಟ ನಡೆಸಲಾಗಿದೆ. ಪರಿಸ್ಥಿತಿ ಉದ್ವಿಗ್ನಗೊಂಡ ಪರಿಣಾಮವಾಗಿ