ಅರಣ್ಯ ಸಚಿವರಾದ ಶ್ರೀ ಈಶ್ವರ ಬಿ ಖಂಡ್ರೆರವರ ಕಛೇರಿಯಲ್ಲಿ ಇಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್ . ಎಸ್ ಬೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಶ್ರೀ ಎ. ಎಸ್ ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರುಗಳ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಜರುಗಿತ್ತು.ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಶ್ರೀ ಎ. ಎಸ್ ಪೊನ್ನಣ್ಣ ಮಾತನಾಡಿ ಜಮ್ಮಾಮಲೆ ಹಿಡುವಳಿದಾರ ಆಸ್ತಿ ಹಕ್ಕು ರಕ್ಷಣೆ ಮತ್ತು ಅವರಿಗೆ ನ್ಯಾಯ ದೊರಕಬೇಕು. ನ್ಯಾಯಾಲಗಳಲ್ಲಿ ಆದೇಶವಾಗಿದೆ. ಈ ಬಗ್ಗೆ ಶ್ರೀಘ್ರವಾಗಿ ಕ್ರಮವಹಿಸಬೇಕೆಂದು ವಿವರಿಸಿದರು. ಸಚಿವರು ಕೂಡಲೇ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು. ಸಿ