Download Now Banner

This browser does not support the video element.

ಚಿತ್ರದುರ್ಗ: ಕೊಂಡ್ಲಹಳ್ಳಿ ಗ್ರಾಮದಲ್ಲಿ ವಿವಿಧ ಜಾನಪದ ಕಲಾ ವಾದ್ಯಗಳೊಂದಿಗೆ ಅದ್ದೂರಿಯಾಗಿ ನಡೆದ ಮಹಾಶಕ್ತಿ ಗಣಪತಿ ವಿಸರ್ಜನಾ ಮೆರವಣಿಗೆ

Chitradurga, Chitradurga | Aug 31, 2025
ಮೊಳಕಾಲ್ಮುರು:- ಕೊಂಡ್ಲಹಳ್ಳಿ ಗ್ರಾಮದಲ್ಲಿ ಮಹಾ ಶಕ್ತಿ ಗಣಪತಿ ವಿಸರ್ಜನಾ ಮೆರವಣಿಗೆ ಜಾನಪದ ವಾದ್ಯಗಳ ಮೂಲಕ ಅದ್ದೂರಿಯಾಗಿ ನಡೆಯಿತು. ಗ್ರಾಮಾಂತರ ಪ್ರೌಢಶಾಲೆಯ ಆವರಣದಲ್ಲಿ ಪ್ರತಿವರ್ಷದಂತೆ ವಿನಾಯಕ ಸೇವಾ ಸಮಿತಿಯಿಂದ ಐದು ದಿನಗಳ ಕಾಲ ಗಣೇಶನನ್ನು ಪ್ರತಿಷ್ಠಾಪಿಸಲಾಗಿತ್ತು. ಬೆಳಗ್ಗೆ ಗಣಪತಿಗೆ ಪೂಜೆ ಸಲ್ಲಿಸಿ ಹಾಗೂ ಮಹಾಮಂಗಳಾರತಿ ನೆರವೇರಿಸಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಬಳಿಕ ವಿವಿಧ ಬಗೆಯ ಹೂಗಳಿಂದ ಬಾಳೆ ಕಂದುಗಳಿಂದ ಅಲಂಕರಿಸಲಾಗಿದ್ದ ವಾಹನದಲ್ಲಿ ಗಣಪತಿಯನ್ನು ಕೂರಿಸಿ ಭಕ್ತರ ಜಯ ಘೋಷದ ನಡುವೆ ಮೆರವಣಿಗೆಗೆ ಚಾಲನೆ ನೀಡಲಾಯಿತು.
Read More News
T & CPrivacy PolicyContact Us