Download Now Banner

This browser does not support the video element.

ಹಾಸನ: ಕಂಠಪೂರ್ತಿ ಕುಡಿದು ಬಿಲ್ ಕೇಳಿದ್ದಕ್ಕೆ ಹೋಟೆಲ್ ವಸ್ತುಗಳು ಪುಡಿಪುಡಿ! ನಗರದ ಕ್ವಾಲಿಟಿ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಘಟನೆ

Hassan, Hassan | Sep 9, 2025
ಕಂಠಪೂರ್ತಿ ಕುಡಿದು ಬಿಲ್‌ ಕೇಳಿದಾಗ ಐವರು ಸೇರಿ ರೆಸ್ಟೋರೆಂಟ್‌ನ ಕುರ್ಚಿ, ಕಿಟಕಿ ಗಾಜು ಒಡೆದು ಮದ್ಯದ ಬಾಟಲಿಯಿಂದ ಸಿಬ್ಬಂದಿ ತಲೆಗೆ ಹೊಡೆದಿರುವ ಘಟನೆ ನಗರದ ಕ್ವಾಲಿಟಿ ಬಾರ್‌ ಅಂಡ್‌ ರೆಸ್ಟೋರೆಂಟ್‌ನಲ್ಲಿ ನಡೆದಿದೆ. ನಗರದ ರಘು, ದರ್ಶನ್‌, ತೇಜು, ಲಕ್ಷ್ಮೀಶ ಹಾಗು ಉಮೇಶ ದಾಂಧಲೆ ಮಾಡಿದವರು. ಸೆ. 7ರ ಮಧ್ಯಾಹ್ನ ರೆಸ್ಟೋರೆಂಟ್‌ಗೆ ಬಂದಿದ್ದ ಅವರು ಮದ್ಯ ಹಾಗು ಊಟ ಆರ್ಡರ್‌ ಮಾಡಿದ್ದಾರೆ. ಸಂಜೆ 7.30ಕ್ಕೆ ಸಿಬ್ಬಂದಿ ಸುದೀಪ್‌ 18,250 ರೂ. ಬಿಲ್‌ ಕೊಟ್ಟಿದ್ದು ಆಗ ಹಣ ಹೊಂದಿಸಲು ಸಾಧ್ಯವಾಗದೆ ಅವರವರೇ ಜಗಳ ಮಾಡಿಕೊಂಡಿದ್ದಾರೆ. ಈ ನಡುವೆ ರಘು ಏಕಾಏಕಿ ಕುರ್ಚಿಯನ್ನು ಟೇಬಲ್‌ ಮೇಲೆ ಎಸೆದು ಸಾಮಾಗ್ರಿಗಳನ್ನೆಲ್ಲ ಒಡೆದು ಹಾಕಿದ್ದಾನೆ.
Read More News
T & CPrivacy PolicyContact Us